ತೊಗರ್ಸಿಯ ಮಲ್ಲಿಕಾರ್ಜುನ ಹಾಗೂ ಭ್ರಮರಾಂಬ ದೇವಾಲಯಗಳಎಡಭಾಗದಲ್ಲಿ ಶ್ರೀ ಕಾಶೀ ಪೀಠದ ಶಾಖಾಮಠವಾದ ಶ್ರೀ ಪಂಚವಣಿಗೆ ಮಠವುಪುತ್ರವರ್ಗದ ಪರಂಪರೆಯಲ್ಲಿ ಶ್ರೀ ಚನ್ನವೀರ ದೇಶೀಕೇಂದ್ರ ಸ್ವಾಮಿಗಳಿಂದ 17ನೇಶತಮಾನದಲ್ಲಿ ಸ್ಥಾಪನೆಗೊಂಡಿದೆ.ಶ್ರೀ ಮಠವು ಪ್ರಾಚೀನ ಪರಂಪರೆಯನ್ನು ಹೊಂದಿದ್ದು ಕೆಳದಿ ಅರಸರಆಶ್ರಯದಲ್ಲಿ ಬೆಳೆದು ಬಂದಿದೆ. ಹಾಗೆಯೇ ಅಲ್ಲಿಂದ ಇಲ್ಲಿಯವರೆಗೂ ಸಮಾಜದಲ್ಲಿ ಧರ್ಮಜಾಗೃತಿ ಕಾರ್ಯವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಹಾಗೆಯೇ ಶೈಕ್ಷಣಿಕವಾಗಿಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ.ಈಗಿನ ಶ್ರೀಗಳಾದ ಶ್ರೀ ಷ.ಬ್ರ. ಚನ್ನವೀರ ದೇಶೀಕೇಂದ್ರ ಶಿವಾಚಾರ್ಯಸ್ವಾಮಿಗಳು 1991 ರಲ್ಲಿ ಮಠದ ಅಧಿಕಾರವನ್ನು ವಹಿಸಿಕೊಂಡು ಮನ್ನಡೆಸಿಕೊಂಡುಬರುತ್ತಿದ್ದಾರೆ. ಹಾಗೂ ಮಠದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಭಕ್ತರ ಸಹಕಾರದೊಂದಿಗೆ ಧಾರ್ಮಿಕ ಕಾರ್ಯಗಳನ್ನು ನಡೆಸುತ್ತಿದ್ದಾರೆ.ಶ್ರೀಗಳು ಮಠದಲ್ಲಿ ಪ್ರತಿ ಅಮವಾಸ್ಯೆಗೆ ವಿಶೇಷ ಪೂಜೆಗಳೊಂದಿಗೆ ಶ್ರಾವಣಮಾಸದಲ್ಲಿ ನಿತ್ಯ ರುದ್ರಾಭಿಷೇಕ, ದಸರಾದಲ್ಲಿ ನಿತ್ಯ ವಿಶೇಷ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿವರಾತ್ರಿಯಲ್ಲಿ ಶ್ರೀಮಠದ ಜಾತ್ರೆಯನ್ನು ಹತ್ತು ದಿನಗಳ ಪರ್ಯಂತಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ.
Swamiji
Swamiji Name :
ಶ್ರೀ ಷ.ಬ್ರ. ಚನ್ನವೀರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು
Date of Birth :
20-1-1968
Place :
ತೊಗರ್ಸಿ ಶಿಕಾರಿಪುರ ತಾ||
Pattadikara :
1-11-1991
Photo :
Programs
ಪ್ರತಿ ಅಮವಾಸ್ಯೆಗೆ ವಿಶೇಷ ಪೂಜೆ. ಶ್ರಾವಣಮಾಸದಲ್ಲಿ ನಿತ್ಯ ರುದ್ರಾಭಿಷೇಕ, ವಿಶೇಷ ಕಾರ್ಯಕ್ರಮಗಳು. ದಸರಾದಲ್ಲಿ ನಿತ್ಯ ವಿಶೇಷ ಕಾರ್ಯಕ್ರಮಗಳು.
Institutions
ಕಿರಿಯ/ ಹಿರಿಯ ಪ್ರಾಥಮಿಕ ಶಾಲೆ (1). ಪ್ರೌಢಶಾಲೆ (4) ಒಟ್ಟು ವಿದ್ಯಾರ್ಥಿಗಳು 500.
Photos
Full Address Kannada
ಶ್ರೀ ಪಂಚವಣ್ಣಿಗೆ ಮಠ ತೊಗರ್ಸಿ - 577 433 ಶಿಕಾರಿಪುರ ತಾ., ಶಿವಮೊಗ್ಗ ಜಿ.